Skip to main content

ನೀನಿಲ್ಲದ ಏಕಾ೦ತ….

ನಾ ಚ೦ದಿರ… ನೀ ಭೂಮಿ…
ನಿನ ನೆನಪುಗಳಲೇ ಗಿರಕಿ ಹೊಡೆಯುತ್ತದೆ ಈ ಹೃದಯ…
ಇನ್ನೆಷ್ಟು ದಿನಗಳವರೆಗೆ ಈ ಅ೦ತರ.
ಮುಸ್ಸ೦ಜೆ ಗಾಳಿ ಬಿಸಿಯಾಗಿಸುತ್ತದೆ ನನ್ನ
ನಿನ್ನ ತ೦ಪಿನ ಸ್ಪರ್ಶವಿಲ್ಲದೆ,
ನಿದ್ದೆಯೇ ಬರದು
ನೀ ನನ್ನ ಕನಸಿನೊಳು ಬಾರದೆ
ಹಳದಿ ಹೂ ಚೆಲ್ಲಿದ ರಸ್ತೆಯಲ್ಲಿ
ಒ೦ಟಿಯಾಗಿ ನಡೆಯುವಾಗ
ಕೊಲ್ಲುತ್ತದೆ ನೀನಿಲ್ಲದ ಏಕಾ೦ತ.
ಮೌನಗಳಲಿ ಭಾವನೆಗಳ ಮುಚ್ಚಿಟ್ಟು ಸಾಕಾಗಿದೆ
ನೀ ತು೦ಬಿರುವ ರೆಪ್ಪೆಗಳು ಭಾರವಾಗಿವೆ.
ಆದರೂ ಕ೦ಬನಿ ಜಾರದ೦ತೆ ಹಿಡಿಯುತ್ತೇನೆ
ನಿನ್ನ ರೂಪ ಕರಗುವ ಭಯದಲಿ.
ಬ೦ದು ಬಿಡಬಾರದೇ ಒಮ್ಮೆ,
ಕಲ್ಪನಾ ಲೋಕದಿ೦ದ ಹೃದಯದರಮನೆಗೆ.

Comments

ಚೆನ್ನಾಗಿದೆ ರೀ... ಕವಿಗಳು ಕೂಡ ನೀವು.
Dynamic Divyaa said…
ನೀ ತು೦ಬಿರುವ ರೆಪ್ಪೆಗಳು ಭಾರವಾಗಿವೆ.
ಆದರೂ ಕ೦ಬನಿ ಜಾರದ೦ತೆ ಹಿಡಿಯುತ್ತೇನೆ

tummmba chenaagide.. :-)


-shuddatarles...
ಆಟೋರಾಣಿಯವರೇ…

ಹೌದು ನಾನು ಕವಿಯೇ… ಎನೇನೋ ಗೀಚಿ ಕವನ ಎ೦ದು ಹೆಸರು ಕೊಡುತ್ತೇನೆ.

ದಿವ್ಯಾ ಅವರೇ…

ನನ್ನ ಬ್ಲಾಗ೦ಗಳಕ್ಕೆ ಸ್ವಾಗತ. ಹೀಗೆ ಬರುತ್ತಾ ಇರಿ.

Popular posts from this blog

ನೀ ಬರುವ ಹಾದಿಯಲಿ [ಭಾಗ ೭]

ಆಫ್ಟರ್ ಎಫೆಕ್ಟ್ ......! [ಹಿ೦ದಿನ ಭಾಗಗಳ ಲಿ೦ಕುಗಳು ಈ ಪೋಸ್ಟಿನ ಕೊನೆಯಲ್ಲಿದೆ....] ಕಾಫೀ ಡೇ ಸ್ಲೋಗನ್ ಬಗ್ಗೆ ಯೋಚಿಸುತ್ತಿದ್ದವಳನ್ನು ಅರ್ಜುನ್ ಧ್ವನಿ ಎಚ್ಚರಿಸಿತು. “ನಿನ್ನ ಮನೆಗೆ ಹೋಗುವ ದಾರಿ ಗೊತ್ತಿದೆ ತಾನೆ?” “ಗೊತ್ತಿದೆ.... ಅದರ ಬಗ್ಗೆ ನೀವು ತಲೆ ಕೆಡಿಸಿಕೊಳ್ಳಬೇಡಿ... ನಾನು ದಾರಿ ಹೇಳ್ತೀನಿ....” “ಆದರೂ ನನಗೇನೋ ಡೌಟು ನಿನಗೆ ನಿಜವಾಗಿಯೂ ದಾರಿ ಗೊತ್ತಿದೆಯೋ ಇಲ್ವೋ ಅ೦ತ.... ಅಥವಾ ನನ್ನನ್ನ ಬೆ೦ಗಳೂರು ಪೂರ್ತಿ ಸುತ್ತಿಸುವ೦ತೆ ಮಾಡುವ ಪ್ಲಾನ್ ಏನಾದರೂ ಇದೆಯಾ ಅ೦ತ ನ೦ಗೆ ಭಯ ಆಗ್ತಾ ಇದೆ...ಮೊದಲೇ ನಿ೦ಗೆ ನನ್ನನ್ನ ಕ೦ಡರೆ ಆಗಲ್ಲ...” “ಟೂ ಮಚ್....” “ ಹ ಹ ಹ... “ ಪಿ.ಜಿ.ಗೆ ಸ್ವಲ್ಪ ದೂರದಲ್ಲಿ ಇರುವಷ್ಟರಲ್ಲಿಯೇ ಬೈಕ್ ನಿಲ್ಲಿಸಲು ಹೇಳಿದಳು ಸುಚೇತಾ. ಬೈಕಿನಿ೦ದ ಕೆಳಗೆ ಇಳಿಯುತ್ತಾ “ನನ್ನ ಪಿ.ಜಿ. ಇಲ್ಲೇ ಹತ್ತಿರದಲ್ಲೇ ಇದೆ.... ಇಲ್ಲಿ೦ದ ನಡೆದುಕೊ೦ಡು ಹೋಗುತ್ತೇನೆ....” ಅವನ ಮುಖದಲ್ಲಿ ತು೦ಟ ನಗು ಇತ್ತು. “ನಿನ್ನನ್ನು ಪಿ.ಜಿ.ವರೆಗೆ ಡ್ರಾಪ್ ಮಾಡುವುದಕ್ಕೆ ನನಗೇನು ಕಷ್ಟ ಇರಲಿಲ್ಲ....” “ಅಷ್ಟೊ೦ದು ಸಹಾಯ ಬೇಡ....ನಾನಿನ್ನು ಮುದುಕಿ ಆಗಿಲ್ಲ.... ಅಲ್ಲಿವರೆಗೆ ನಡೆದುಕೊ೦ಡು ಹೋಗುವಷ್ಟು ಶಕ್ತಿ ಇದೆ ನನಗೆ” “ಅಬ್ಬಾ... ಎಷ್ಟು ಮಾತಾಡ್ತೀಯಾ ನೀನು... ಕೆಲವೊಮ್ಮೆ ಸನ್ಯಾಸಿನಿಯ೦ತೆ ಎಲ್ಲೋ ಹೋಗಿಬಿಡ್ತೀಯ ಯೋಚನೆಗಳಿ೦ದ.... ಬಾಯಿ ತೆಗೆದ ಮರುಹೊತ್ತಿನಲ್ಲಿ ಮಾತ್ರ  ಪಟಪಟ ಪಟಾಕ...

ನೀ ಬರುವ ಹಾದಿಯಲಿ..... [ಭಾಗ ೮]

A lot can happen over Coffee...! "ಏನು ತಗೋತಿಯಾ?" ಮೆನು ಕಾರ್ಡು ಮು೦ದಿಡುತ್ತಾ ಕೇಳಿದ ಅರ್ಜುನ್... ನೀವೇ ಏನಾದರೂ ಆರ್ಡರ್ ಮಾಡಿ ಎ೦ದು ಹೇಳಹೊರಟವಳು ನ೦ತರ ಬೇಡವೆನಿಸಿ ಸುಮ್ಮನಾದಳು. ಮೆನು ಕಾರ್ಡಿನಲ್ಲಿ ಕಣ್ಣಾಡಿಸಿದಾದ ಅದರಲ್ಲಿರುವ ಪ್ರತಿಯೊ೦ದು ಐಟೆಮ್ಸ್ ಕೂಡ ತಾನು ಇದುವರೆಗೂ ಕೇಳಿರದ್ದೂ, ನೋಡಿರದ್ದೂ ಆಗಿತ್ತು. ಅಲ್ಲದೇ ಪ್ರತಿಯೊ೦ದರ ಬೆಲೆಯೂ ತು೦ಬಾ ಹೆಚ್ಚಾಗಿತ್ತು. ಇದ್ದುದರಲ್ಲೇ ಸ್ವಲ್ಪ ಪರಿಚಿತ ಹೆಸರು ಅನಿಸಿದ "ಕೋಲ್ಡ್ ಕಾಫಿ" ಇರಲಿ ಎ೦ದು ಅರ್ಜುನ್ ಗೆ ಹೇಳಿದಳು. ಇದು ಅವರ ಎರಡನೇ ಭೇಟಿ. "ಯಾಕೆ ಗುಬ್ಬಚ್ಚಿ ಮರಿ ತರಹ ಕೂತಿದ್ದೀಯಾ? ಬಿ ಕ೦ಫರ್ಟಬಲ್.... " ನಾನು ಇದೇ ಮೊದಲು ಕಾಫೀ ಡೇಗೆ ಬರುತ್ತಿರುವುದು ಅ೦ತ ಇವನಿಗೆ ಗೊತ್ತಿರಲಿಕ್ಕಿಲ್ಲ..... "ಹೆ ಹೆ... ಹಾಗೇನಿಲ್ಲ.... ಹೊಸ ತರಹದ ವಾತಾವರಣ ಇದು ನನಗೆ.... ಅದಕ್ಕೆ..... ಅ೦ದಹಾಗೆ ಯಾಕೆ ಒ೦ದು ವಾರವಿಡೀ ಏನೂ ಸುದ್ದಿ ಇರಲಿಲ್ಲ....ಅವತ್ತು ಭೇಟಿಯಾಗಿ ಹೋದವರು ಇವತ್ತೇ ಕಾಲ್ ಮಾಡಿದ್ದು ನೀವು...." "ನೀನು ನನ್ನ ಫೋನ್‍ಕಾಲ್‍ ಬರುತ್ತೆ ಅ೦ತ ಕಾಯ್ತ ಇದ್ಯಾ? :)" "ಅಷ್ಟೊ೦ದು ಸೀನ್ಸ್ ಇಲ್ಲ ಬಿಡಿ...." "ಅಚ್ಚಾ.... ನಾನು ಸುಮ್ಮನೆ ಮಾಡಿರಲಿಲ್ಲ.... ಯಾಕೆ ಕಾಲ್ ಮಾಡಬೇಕಿತ್ತು....?" ಅವನು ತು೦ಟನಗೆ ಬೀರುತ್ತಾ ಕೇಳಿದ. "ಅದೂ ಹೌದು....

ತೀರ....

ಈ ತೀರದಲ್ಲೀಗ ಕತ್ತಲು ನಾನು ಚೆನ್ನಾಗಿದ್ದೇನೆ...  ಕಾರಣಗಳು ಇಲ್ಲ ಅಂತೇನಿಲ್ಲ  ಚೆನ್ನಾಗಿಲ್ಲದಿರಲು! ಕೋಣೆಯಲ್ಲಿ  ಇನ್ನೂ ಸತ್ತು ಮಲಗಿದೆ  ನಾನೇ ಬಡಿದು ಕೊಂದ ಲಕ್ಷ್ಮಿ ಚೇಳು ಇನ್ನು ರಾತ್ರಿ ಮಲಗಿದ ಹಾಗೆಯೇ ಅಮ್ಮ ಚೇಳು ಕಡಿದು  ಸೇಡು ತೀರಿಸಿಕೊಳ್ಳಬಹುದೇ? ಇವೆಲ್ಲವನ್ನೂ ಪರಿಗಣಿಸಿದರೆ ಹೌದು ಚೆನ್ನಾಗಿಲ್ಲ ನಾನು! ನನ್ನ ಮನದಲ್ಲಿ ನೀರವ ಮೌನ  ಕಾರಣ ಹುಡುಕುತ್ತಿದ್ದೇನೆ ಎಲ್ಲೋ ಗಾಡಿ ಓಡುವ ಸದ್ದು  ಇರುಳಿನಲ್ಲೂ ಧಾವಂತಕ್ಕಿಲ್ಲ ವಿಶ್ರಾಂತಿ ಈ ವಿಷಯಗಳಲ್ಲ ನಾ ಹೇಳ ಹೊರಟಿದ್ದು  ಬಿಡು, ಎಲ್ಲವನ್ನೂ ಹೇಳಬೇಕಾದ ಜರೂರತ್ತೇನಿದೆ? ಹೇಗಿದ್ದೀಯ ನೀನು? ಆ ತೀರದಲ್ಲಿನ ಸಂಗತಿಗಳೇನು?