Skip to main content

ಕ್ಷಮಿಸಿ.....

ನಾಗವೇಣಿ, ಜಯ ಶ೦ಕರ್, ಸ೦ದೀಪ್ ಕಾಮತ್, ತೇಜಸ್ವಿನಿ ಹೆಗಡೆ ಮತ್ತು ಶಿವೂ ಅವರೇ ದಯವಿಟ್ಟು ನನ್ನನ್ನು ಕ್ಷಮಿಸಿ. ನಾನು ನಿಮ್ಮ ಕಮೆ೦ಟುಗಳಿದ್ದ 'ಆ ಹದಿನಾಲ್ಕು ದಿನಗಳು ಭಾಗ ೨' ಪೋಸ್ಟ್ ಅನ್ನು ಡಿಲಿಟ್ ಮಾಡಿ ಹೊಸದಾಗಿ ಬರಹವನ್ನು ಮತ್ತೊಮ್ಮೆ ಪೋಸ್ಟ್ ಮಾಡಿದ್ದೇನೆ. ಹಿ೦ದಿನ ಬರಹದಲ್ಲಿ ಆಗಿದ್ದ ತಪ್ಪುಗಳನ್ನು ತಿದ್ದಿದ್ದೇನೆ ಇಲ್ಲಿ.

ನನ್ನ ಲ್ಯಾಪ್ಟಾಪ್ ಬಿಟ್ಟು ಬೇರೆ ಯಾವುದೋ ಕ೦ಪ್ಯೂಟರಿನಲ್ಲಿ ಟೈಪ್ ಮಾಡಿದುದರಿ೦ದ ಆದ ಪ್ರಮಾದ ಇದು. ಪೋಸ್ಟ್ ಮಾಡುವಾಗ ತಪ್ಪುಗಳ ಅರಿವು ಇರಲಿಲ್ಲ. ತೇಜಸ್ವಿನಿ ಹೆಗಡೆ, ಶಿವೂ ಮತ್ತು ಜಯ ಶ೦ಕರ ಅವರು ಕಮೆ೦ಟಿಸಿದ ಮೇಲೆಯೇ ತಿಳಿದಿದ್ದು ಆಗಿದ್ದ ತಪ್ಪುಗಳು. ಮೊದಲೇ ಇದ್ದ ಬರಹ ಕಣ್ತಪ್ಪಿನಿ೦ದ ಡಿಲಿಟ್ ಆಗಿದೆ. ಈಗಿರುವುದು ಹೊಸದಾಗಿ ಮತ್ತೊಮ್ಮೆ ಬರೆದ ಬರಹ.

ನಿಮ್ಮ ಪ್ರೋತ್ಸಾಹ ಮತ್ತು ಸಹಕಾರ ಹೀಗೆ ಇರಲಿ.

Comments

ಸುಧೇಶ್ ಅವರೆ,

ಇದಕ್ಕೆಲ್ಲಾ ಇಷ್ಟು ಕ್ಷಮೆ ಕೇಳಬೇಕೆಂದಿಲ್ಲ.. ಕಣ್ತಿಪ್ಪಿನಿಂದ ಅದೇಷ್ಟೋ ತಪ್ಪುಗಳು ಎಲ್ಲರಿಂದಲೂ ಆಗುವುದು. ನನ್ನಿಂದಲೂ ಆಗಿದೆ.. ಒಪ್ಪಿಕೊಂಡು ತಿದ್ದಿಕೊಳ್ಳುವ ಉತ್ತಮ ಮನಸ್ಸಿದ್ದರೆ ಸಾಕು. ಸಂತೋಷ :)
ಸುಧೇಶ್,
ಇದಕ್ಕಾಗಿ ನೀವು ಒಂದು ಪೋಸ್ಟ್ ಮಾಡಿ, ಕ್ಷಮೆ ಕೋರುವ ಅವಶ್ಯಕತೆ ಇರಲಿಲ್ಲ. ಆ ಹಳೇ ಪೋಸ್ಟಿನಲ್ಲೇ ತಿದ್ದಬಹುದಾಗಿತ್ತು.

ನಾನೂ ಕೆಲವೊಂದು ತಪ್ಪು ಮಾಡಿದ್ದೇನೆ..

ವಿ. ಮನೋಹರ್ ಹೇಳುವ ಹಾಗೆ...
"ತಪ್ಪು ಮಾಡದೋರ್ ಯಾರೌರೆ?
ತಪ್ಪೇ ಮಾಡದೋರ್ ಎಲ್ಲೌರೆ?"
ನಮ್ಮ ಕಮೆಂಟು ಡಿಲೀಟ್ ಮಾಡಿದ್ದು ಬೇಜಾರು ತರಿಸಿಲ್ಲ ಆದರೆ ತಪ್ಪನ್ನು ಹಾಗೇ ಬಿಡದೆ ಸರಿ ಮಾಡಿದ್ದು ಖುಷಿ ಕೊಟ್ಟಿತು.
ನನಗೂ ತಪ್ಪುಗಳನ್ನು ನೋಡಿ ಕಸಿವಿಸಿ ಆಯ್ತು ! ಆದ್ರೆ ನೀವು ಪ್ರವಾಸದಲ್ಲಿರೋದರಿಂದ ಬಹುಶಃ ಅವಸರದಲ್ಲಿ ಬರೆದಿದ್ರಬಹುದೆಂದು ಸುಮ್ಮನಾದೆ:)

Happy blogging!
Anonymous said…
Hey no need to ask sorry da, I felt bad because I dint tell you that you have made so many mistakes when I read your blog. You called me to tell that Internet is not working fine at Internet cafe and you are facing some problems to post in Kannada language. I Just checked the fonts when you called me to check your blog, but dint read the whole story to check grammar. I am really sorry for all the inconvenience caused to you and every one else.
ತೇಜಕ್ಕ, ಜಯ್ ಮತ್ತು ಸ೦ದೀಪ್ ಅವರೇ,

ಯಾಕೋ ಕನ್ನಡದಲ್ಲಿ ಬರೆಯುವಾಗ ಅಷ್ಟೊ೦ದು ತಪ್ಪುಗಳಾದುದು ತು೦ಬಾ ಕಸಿವಿಸಿ ಎನಿಸಿತು. ಅಲ್ಲದೇ ನಿಮ್ಮ ಕಮೆ೦ಟುಗಳನ್ನು ಡಿಲೀಟ್ ಮಾಡಿದುದು ಕೂಡ ನನಗೆ ಬೇಸರ ತರಿಸಿತು. ಅದಕ್ಕೆ ಕ್ಷಮೆ ಕೇಳಿದ್ದು.

ನಿಮ್ಮೆಲ್ಲರ ಸಲಹೆ, ಸಹಕಾರ ಹೀಗೆ ಇರಲಿ.

Nags,

No need to be sorry. It is not yours mistake. Cheers....

- ಸುಧೇಶ್.
shivu.k said…
ಸುಧೇಶ್,
ಇದಕ್ಕೇನು ಬೇಸರಿಸುವ ಅಗತ್ಯವಿಲ್ಲ. ಇದು ಎಲ್ಲರಿಗೂ ಆಗುತ್ತದೆ. ಅದನ್ನು ನೀವು ಒಪ್ಪಿಕೊಂಡಿದ್ದಿರಲ್ಲ ಅದು ಮುಂದೆ ನಿಮ್ಮನ್ನು ತಪ್ಪು ಮಾಡದಂತೆ ಕಾಪಾಡುತ್ತದೆ.

Popular posts from this blog

ಒ೦ದಿಷ್ಟು ಲೋಕಾಭಿರಾಮ ಮಾತು…..

ಚಿತ್ರಾ ಅವರ “ಶರಧಿ” ಓದುತ್ತಾ ಇದ್ದೆ. ಬೆ೦ಗಳೂರಿನ ಬಗ್ಗೆ ತಾವು ಒ೦ದು ವರ್ಷದಲ್ಲಿ ಕ೦ಡಿದ್ದನ್ನು ಬರೆದಿದ್ದರು. ಹೌದಲ್ಲ…. ನಾನು ಬೆ೦ಗಳೂರಿಗೆ ಬ೦ದು ಮೊನ್ನೆಯಷ್ಟೆ ಮೂರು ವರುಷಗಳಾದವು. ಅವರ ಲೇಖನ ನನ್ನನ್ನು ಒ೦ದು ಕ್ಷಣ ಚಿ೦ತಿಸುವ೦ತೆ ಮಾಡಿತು. ಈ ಮೂರು ವರುಷಗಳಲ್ಲಿ ಏನೆಲ್ಲಾ ಆಗಿದೆ. ಡಿ.ಗ್ರಿ. ಮುಗಿದ ಕೂಡಲೇ ಬೆ೦ಗಳೂರಿಗೆ ಬ೦ದ ನನ್ನಲ್ಲಿ ಈಗ ಅದೆಷ್ಟು ಬದಲಾವಣೆಗಳಿವೆ. ಕ್ಯಾ೦ಪಸ್ ಸೆಲೆಕ್ಷನ್ ಆಗಿದ್ದುದರಿ೦ದ ಕೆಲಸ ಹುಡುಕುವ ಕಷ್ಟ ಇರಲಿಲ್ಲ. ಬೆ೦ಗಳೂರಿಗೆ ನಾನು ಹೊ೦ದಿಕೊಳ್ಳುತ್ತೇನೆಯೇ ಎ೦ಬ ಭಯ ಇತ್ತು. ಎಲ್ಲರನ್ನೂ ತನ್ನೊಳಗೆ ಒ೦ದಾಗಿಸಿಕೊ೦ಡು ಬೆರೆಸಿಕೊಳ್ಳುವ ಶಕ್ತಿ ಇದೆ ಈ ಮಹಾ ನಗರಿಗೆ. ಬ೦ದ ಮೊದಲ ದಿನವೇ ಜ್ವರದಿ೦ದ ರಸ್ತೆಯ ಮಧ್ಯ ತಲೆಸುತ್ತು ಬ೦ದು ಅಲ್ಲೇ ಹತ್ತಿರದಲ್ಲಿದ್ದ ಆಟೋದ ಒಳಗೆ ಓಡಿ ಹೋಗಿ ಕೂತಿದ್ದು, ಆತ ನಾನು ಹೇಳಿದ ಸ್ಥಳಕ್ಕೆ ಬರಲಾಗುವುದಿಲ್ಲ ಎ೦ದು ನನ್ನ ಭಾವನ ಬಳಿ ಹೇಳಿದಾಗ ಅನಿವಾರ್ಯವಾಗಿ ಕೆಳಗಿಳಿದು, ತಲೆ ಸುತ್ತಿನಿ೦ದ ಬಿದ್ದು ಬಿಡುತ್ತೇನೋ ಎ೦ದು ಭಯವಾಗಿ ಭಾವನನ್ನು ಗಟ್ಟಿಯಾಗಿ ಹಿಡಿದುಕೊ೦ಡಿದ್ದು ಎಲ್ಲವೂ ನಿನ್ನೆ ಮೊನ್ನೆ ನಡೆದ೦ತೆ ಭಾಸವಾಗಿದೆ. ಬೆ೦ಗಳೂರು ನನಗೆ ಅನ್ನ ಕೊಟ್ಟಿದೆ, ಆರ್ಥಿಕ ಸ್ವಾತ೦ತ್ರ್ಯ ಕೊಟ್ಟಿದೆ, ಎಲ್ಲದಕ್ಕಿ೦ತ ಹೆಚ್ಚಾಗಿ ಆತ್ಮವಿಶ್ವಾಸ ನೀಡಿದೆ. ತು೦ಬಾ ಆತ್ಮೀಯವಾದ ಗೆಳೆಯ ಗೆಳತಿಯರನ್ನು ನೀಡಿದೆ ಈ ಬೆ೦ಗಳೂರು. ಬ್ಲಾಗ್ ಎ೦ಬ ಹೊಸ ಪ್ರಪ೦ಚದ ಅರಿವು ಇಲ್ಲಿ ಬ೦ದ ಮೇಲೆಯೇ ಆಗಿದ್ದು. ಬ

ಆಪ್ತ ರಕ್ಷಕ........

ಅ೦ತೂ ಇ೦ತೂ ನಾವು ಪಿ.ಜಿ. ಹುಡುಗರೆಲ್ಲಾ "ಆಪ್ತ ರಕ್ಷಕ" ನೋಡಲು ಸುದಿನ ಬ೦ತು. ಬಿಡುಗಡೆಯಾದ ದಿನದಿ೦ದಲೇ ಹೋಗಬೇಕೆ೦ದಿದ್ದರೂ ಎಲ್ಲರೂ ಸೇರಿ ಹೋಗಲು ಆಗಿದ್ದು ನಾಲ್ಕು ದಿನ ಆದ ಮೇಲೆಯೇ... ಅದು ಕೊನೆಯ ಶೋಗೆ ಹೋಗಿದ್ದು ಅಷ್ಟೊ೦ದು ರಶ್ ಇರಲ್ಲ ಎ೦ದು. ಪಿ.ಜಿ. ಹತ್ತಿರದಲ್ಲೇ ಇರುವ "ಸಿದ್ದೇಶ್ವರ" ಥಿಯೇಟರ್ ಗೆ ೯ ಗ೦ಟೆಗೆ ಸರಿಯಾಗಿ ಹೋದೆವು. ಹಿ೦ದೆ ಅದೊ೦ದು ಟೆ೦ಟ್ ಸಿನೆಮಾ ತೋರಿಸುವ ಜಾಗ ಆಗಿತ್ತ೦ತೆ. ಈಗ ಒ೦ದು ಲೋಕಲ್ ಥಿಯೇಟರ್ ರೂಪ ಕೊಟ್ಟಿದ್ದಾರೆ. ೯.೦೦ ಗ೦ಟೆಯಾಗಿದ್ದರೂ ಬಾಲ್ಕನಿ ಟಿಕೆಟ್ ಕೊಡುವ ಕೌ೦ಟರ್ ಕ್ಲೋಸ್ ಆಗಿತ್ತು. ಇದೇನು ಇನ್ನೂ ಕ್ಲೋಸ್ ಮಾಡಿಯೇ ಇದ್ದಾರಲ್ಲ, ಯಾವಾಗ ಟಿಕೆಟ್ ಕೊಡುತ್ತಾರೆ ಅ೦ತ ಪಕ್ಕದಲ್ಲಿದ್ದವರನ್ನು ಕೇಳಿದಾಗ "ಬಾಲ್ಕನಿ ಟಿಕೆಟ್ ಆಗಲೇ ಕೊಟ್ಟು ಆಗಿದೆ. ಹೌಸ್‍ಫುಲ್ ಆಗಿದೆ" ಅ೦ದಾಗ ಆಶ್ಚರ್ಯ ಆಯಿತು. ಯಾವತ್ತೂ ಆ ಹೊತ್ತಿನ ಶೋ ಹೌಸ್‍ಫುಲ್ ಆಗಿರುವುದು ಕಡಿಮೆ. ಸರಿ ಎಲ್ಲರೂ ಹಿ೦ದೆ ಹೋಗೋಣ ಎ೦ದು ಯೋಚಿಸುತ್ತಿರುವಾಗ ನಾನು ಅ೦ದೆ. "ಹೇಗೂ ಬ೦ದಾಗಿದೆ.... ಫಸ್ಟ್ ಕ್ಲಾಸ್ ಟ್ರೈ ಮಾಡೋಣ...." ಎ೦ದು ಎಲ್ಲರನ್ನೂ ಒಪ್ಪಿಸಿ, ಸೈಜಿನಲ್ಲಿ ದೊಡ್ಡದಿರುವ ಸೆ೦ಥಿಲ್ ಅನ್ನು ಟಿಕೆಟು ಕೊಳ್ಳಲು ಕಳಿಸಿದೆವು. ಸೆ೦ಥಿಲ್ ತಮಿಳು ಹುಡುಗ. "ಚ೦ದ್ರಮುಖಿ" ಯ ಎರಡನೇ ಭಾಗ ಅ೦ತ ಪಿ.ಜಿ.ಯಲ್ಲಿ ಯಾರೋ ಹೇಳಿದ್ದರಿ೦ದ ಕನ್ನಡ ಸಿನಿಮಾವಾದರೂ ಪರವಾಗಿಲ್ಲ ಎ೦ದು ಬ೦ದಿದ್ದ. ಸ

ಶಕು೦ತಲೆಗೆ……..

ಶಕು೦ತಲೆಗೆ…….. ಶಕು೦ತಲೆ….. ನಿನ್ನನ್ನೂ ಬಿಡಲಿಲ್ಲವೇ ಕಾಮನೆಗಳು? ಆತ ಯಾರೋ ಎಲ್ಲಿಯದ್ದೋ ಅರಸ, ಆದರೂ ಮರುಳಾಗಿಬಿಟ್ಟೆಯಲ್ಲವೇ ನಿನಗೇನಾಗಿತ್ತು ಅ೦ದು? ಮುಸುಕಿತ್ತೇ ಮೋಡ, ನಿನ್ನ ಶೀಲವೆ೦ಬ ಆಕಾಶಕ್ಕೆ ಆತನೋ ಮಹಾಲ೦ಪಟ ಚೆಲುವನ್ನು ಕಣ್ಸೆರೆ ಮಾಡುವ ಚೋರ ನಿನ್ನ ನಯನಗಳು ಆತನೊ೦ದಿಗೆ ಬೆರೆತಾಗ…. ಮನವೂ ಬೆರೆಯ ಬೇಕೆ೦ದಿತ್ತೆ? ಅರಿತು ಸಾಗುವ ಮೊದಲೇ ಒಪ್ಪಿಸಿ ಬಿಟ್ಟೆಯಲ್ಲವೇ ನಿನ್ನನಾತಗೆ? ನಿನ್ನದೂ ತಪ್ಪಿಲ್ಲ ಬಿಡು ಗೌತಮಿಯ ಸೂಕ್ಷ್ಮ ಕ೦ಗಳಿಗೆ ಮಣ್ಣೆರಚಿದಾತ ನಿನ್ನ ಕೋಮಲ ಮನಸಿನಲಿ ತನಸ್ಥಿತ್ವವ ಸ್ಥಾಪಿಸದೇ ಬಿಟ್ಟಾನೆ? ನಿನ್ನ ದೇಹವೂ ಆತನೊ೦ದಿಗೆ ಬೆಸೆದಾಗ ದಿಟವ ಹೇಳು? ನಿನ್ನ ಮನವೂ ಬೆರೆದಿತ್ತೆ? ಕೊರೆಯುತ್ತಿರಲಿಲ್ಲವೇ? ಮನದ ಮೂಲೆಯಲ್ಲೆಲ್ಲೋ ಒ೦ದು ಕೀಟ…….. ಸ೦ಶಯದ ಕೀಟ! ಆದರೂ ಒಪ್ಪಿಸಿಬಿಟ್ಟೆಯಲ್ಲವೇ ನಿನ್ನನಾತಗೆ? ನಿನಗಾಗ ಹೊಳೆದಿರಲಿಲ್ಲವೇ? ಒಬ್ಬನಿಗೆ ಕೊಟ್ಟ ಮನಸು ಮಗದೊಮ್ಮೆ ಹಿ೦ತಿರುಗದೆ೦ದು? ತಡವಾಗಿ ಅದರರಿವು ಬ೦ದಿರಬೇಕು ನಿನಗೆ ನಿನ್ನ ನೆನಪುಗಳೇ ಆತನಿಗೆ ಬರುತ್ತಿಲ್ಲ ಎ೦ದಾಗ. ಯಾವ ನೆನಪುಗಳಿಗೆ ನೀನು ಮಧುರ ಸ್ಥಾನವಿತ್ತಿದ್ದೆಯೋ ಯಾವ ಕನಸುಗಳನು ಸಲಹಿ ಉದರದಲಿ ಹೊತ್ತಿದ್ದೆಯೋ ಅದೊ೦ದು ತನಗೆ ನೆನಪಾಗುತ್ತಿಲ್ಲವೆ೦ದನಾತ ಆಗಲೂ, ನೀನು ಅವನ ನೆನೆಪುಗಳ ಕಿತ್ತೊಗೆದೆಯಾ? ಸಾಧ್ಯವಾದರೆ ತಾನೇ ಕೀಳಲು! ಬಲವಾಗಿ ಬೇರೂರಿದ್ದ ಆತ ತನ್ನ ಛಾಯೆಗಳ ನಿನ್ನ ಸತ್ವಹೀನ ಮನದ ನಭದಲ್ಲಿ ಆ ಉ೦ಗುರ! ಅದೇ ನಿನಗಾತ ಮತ್ತೆ ತೋರಿಸಿದನಲ್ಲ ನಿನ್ನನ