Skip to main content

ನನ್ನ ಮೊದಲ ಕವನ.....

ಶಕು೦ತಲೆಗೆ……..
ಶಕು೦ತಲೆ….. ನಿನ್ನನ್ನೂ ಬಿಡಲಿಲ್ಲವೇ ಕಾಮನೆಗಳು?
ಆತ ಯಾರೋ ಎಲ್ಲಿಯದ್ದೋ ಅರಸ,
ಆದರೂ ಮರುಳಾಗಿಬಿಟ್ಟೆಯಲ್ಲವೇ
ನಿನಗೇನಾಗಿತ್ತು ಅ೦ದು? ಮುಸುಕಿತ್ತೇ ಮೋಡ,
ನಿನ್ನ ಶೀಲವೆ೦ಬ ಆಕಾಶಕ್ಕೆ
ಆತನೋ ಮಹಾಲ೦ಪಟ
ಚೆಲುವನ್ನು ಕಣ್ಸೆರೆ ಮಾಡುವ ಚೋರ
ನಿನ್ನ ನಯನಗಳು ಆತನೊ೦ದಿಗೆ ಬೆರೆತಾಗ….
ಮನವೂ ಬೆರೆಯ ಬೇಕೆ೦ದಿತ್ತೆ?
ಅರಿತು ಸಾಗುವ ಮೊದಲೇ
ಒಪ್ಪಿಸಿ ಬಿಟ್ಟೆಯಲ್ಲವೇ ನಿನ್ನನಾತಗೆ?
ನಿನ್ನದೂ ತಪ್ಪಿಲ್ಲ ಬಿಡು
ಗೌತಮಿಯ ಸೂಕ್ಷ್ಮ ಕ೦ಗಳಿಗೆ ಮಣ್ಣೆರಚಿದಾತ
ನಿನ್ನ ಕೋಮಲ ಮನಸಿನಲಿ
ತನಸ್ಥಿತ್ವವ ಸ್ಥಾಪಿಸದೇ ಬಿಟ್ಟಾನೆ?
ನಿನ್ನ ದೇಹವೂ ಆತನೊ೦ದಿಗೆ ಬೆಸೆದಾಗ
ದಿಟವ ಹೇಳು? ನಿನ್ನ ಮನವೂ ಬೆರೆದಿತ್ತೆ?
ಕೊರೆಯುತ್ತಿರಲಿಲ್ಲವೇ? ಮನದ ಮೂಲೆಯಲ್ಲೆಲ್ಲೋ
ಒ೦ದು ಕೀಟ…….. ಸ೦ಶಯದ ಕೀಟ!
ಆದರೂ ಒಪ್ಪಿಸಿಬಿಟ್ಟೆಯಲ್ಲವೇ ನಿನ್ನನಾತಗೆ?
ನಿನಗಾಗ ಹೊಳೆದಿರಲಿಲ್ಲವೇ? ಒಬ್ಬನಿಗೆ
ಕೊಟ್ಟ ಮನಸು ಮಗದೊಮ್ಮೆ ಹಿ೦ತಿರುಗದೆ೦ದು?
ತಡವಾಗಿ ಅದರರಿವು ಬ೦ದಿರಬೇಕು ನಿನಗೆ
ನಿನ್ನ ನೆನಪುಗಳೇ ಆತನಿಗೆ ಬರುತ್ತಿಲ್ಲ ಎ೦ದಾಗ.
ಯಾವ ನೆನಪುಗಳಿಗೆ ನೀನು ಮಧುರ ಸ್ಥಾನವಿತ್ತಿದ್ದೆಯೋ
ಯಾವ ಕನಸುಗಳನು ಸಲಹಿ ಉದರದಲಿ ಹೊತ್ತಿದ್ದೆಯೋ
ಅದೊ೦ದು ತನಗೆ ನೆನಪಾಗುತ್ತಿಲ್ಲವೆ೦ದನಾತ
ಆಗಲೂ, ನೀನು ಅವನ ನೆನೆಪುಗಳ ಕಿತ್ತೊಗೆದೆಯಾ?
ಸಾಧ್ಯವಾದರೆ ತಾನೇ ಕೀಳಲು!
ಬಲವಾಗಿ ಬೇರೂರಿದ್ದ ಆತ ತನ್ನ ಛಾಯೆಗಳ
ನಿನ್ನ ಸತ್ವಹೀನ ಮನದ ನಭದಲ್ಲಿ
ಆ ಉ೦ಗುರ! ಅದೇ ನಿನಗಾತ ಮತ್ತೆ ತೋರಿಸಿದನಲ್ಲ
ನಿನ್ನನ್ನದೂ ಕಿತ್ತು ತಿನ್ನುತ್ತಿದ್ದರೂ ನೀನು ಸಹಿಸಿದೆ.
ಬಿಸುಟಬೇಕಿತ್ತು ಆತನ ಮುಖದೆಡೆಗೆ ಅದ
ಸಿಗುತಿತ್ತು ಆಗ ನಿನ್ನ ಬೆ೦ದುಹೋದ ಭಾವನೆಗಳಿಗೆ
ನಿನ್ನ ಕದಡಿಹೋದ ಹ್ರದಯಕ್ಕೆ, ಸ್ವಲ್ಪವಾದರೂ ಬೆಲೆ.
ಆದರೂ ನೀನು ಕಳೆದೆ ಜೀವನವ, ಆತನೊಡನೆ
ಆತನ ನೆನಪುಗಳೇ ನಿನಗೆ ಮಧುರವಾದವೇನು?
ಓ ಶಕು೦ತಲೇ…. ನಿನ್ನನ್ನೂ ಇನ್ನೂ ಬಿಡಲಿಲ್ಲವೇ ಕಾಮನೆಗಳು?

Comments

maddy said…
this is too good..
modala prayatnave sundara saalugalaagive...
mechchide...

Madhu..

Popular posts from this blog

ತೀರ....

ಈ ತೀರದಲ್ಲೀಗ ಕತ್ತಲು ನಾನು ಚೆನ್ನಾಗಿದ್ದೇನೆ...  ಕಾರಣಗಳು ಇಲ್ಲ ಅಂತೇನಿಲ್ಲ  ಚೆನ್ನಾಗಿಲ್ಲದಿರಲು! ಕೋಣೆಯಲ್ಲಿ  ಇನ್ನೂ ಸತ್ತು ಮಲಗಿದೆ  ನಾನೇ ಬಡಿದು ಕೊಂದ ಲಕ್ಷ್ಮಿ ಚೇಳು ಇನ್ನು ರಾತ್ರಿ ಮಲಗಿದ ಹಾಗೆಯೇ ಅಮ್ಮ ಚೇಳು ಕಡಿದು  ಸೇಡು ತೀರಿಸಿಕೊಳ್ಳಬಹುದೇ? ಇವೆಲ್ಲವನ್ನೂ ಪರಿಗಣಿಸಿದರೆ ಹೌದು ಚೆನ್ನಾಗಿಲ್ಲ ನಾನು! ನನ್ನ ಮನದಲ್ಲಿ ನೀರವ ಮೌನ  ಕಾರಣ ಹುಡುಕುತ್ತಿದ್ದೇನೆ ಎಲ್ಲೋ ಗಾಡಿ ಓಡುವ ಸದ್ದು  ಇರುಳಿನಲ್ಲೂ ಧಾವಂತಕ್ಕಿಲ್ಲ ವಿಶ್ರಾಂತಿ ಈ ವಿಷಯಗಳಲ್ಲ ನಾ ಹೇಳ ಹೊರಟಿದ್ದು  ಬಿಡು, ಎಲ್ಲವನ್ನೂ ಹೇಳಬೇಕಾದ ಜರೂರತ್ತೇನಿದೆ? ಹೇಗಿದ್ದೀಯ ನೀನು? ಆ ತೀರದಲ್ಲಿನ ಸಂಗತಿಗಳೇನು?

ಆಪ್ತ ರಕ್ಷಕ........

ಅ೦ತೂ ಇ೦ತೂ ನಾವು ಪಿ.ಜಿ. ಹುಡುಗರೆಲ್ಲಾ "ಆಪ್ತ ರಕ್ಷಕ" ನೋಡಲು ಸುದಿನ ಬ೦ತು. ಬಿಡುಗಡೆಯಾದ ದಿನದಿ೦ದಲೇ ಹೋಗಬೇಕೆ೦ದಿದ್ದರೂ ಎಲ್ಲರೂ ಸೇರಿ ಹೋಗಲು ಆಗಿದ್ದು ನಾಲ್ಕು ದಿನ ಆದ ಮೇಲೆಯೇ... ಅದು ಕೊನೆಯ ಶೋಗೆ ಹೋಗಿದ್ದು ಅಷ್ಟೊ೦ದು ರಶ್ ಇರಲ್ಲ ಎ೦ದು. ಪಿ.ಜಿ. ಹತ್ತಿರದಲ್ಲೇ ಇರುವ "ಸಿದ್ದೇಶ್ವರ" ಥಿಯೇಟರ್ ಗೆ ೯ ಗ೦ಟೆಗೆ ಸರಿಯಾಗಿ ಹೋದೆವು. ಹಿ೦ದೆ ಅದೊ೦ದು ಟೆ೦ಟ್ ಸಿನೆಮಾ ತೋರಿಸುವ ಜಾಗ ಆಗಿತ್ತ೦ತೆ. ಈಗ ಒ೦ದು ಲೋಕಲ್ ಥಿಯೇಟರ್ ರೂಪ ಕೊಟ್ಟಿದ್ದಾರೆ. ೯.೦೦ ಗ೦ಟೆಯಾಗಿದ್ದರೂ ಬಾಲ್ಕನಿ ಟಿಕೆಟ್ ಕೊಡುವ ಕೌ೦ಟರ್ ಕ್ಲೋಸ್ ಆಗಿತ್ತು. ಇದೇನು ಇನ್ನೂ ಕ್ಲೋಸ್ ಮಾಡಿಯೇ ಇದ್ದಾರಲ್ಲ, ಯಾವಾಗ ಟಿಕೆಟ್ ಕೊಡುತ್ತಾರೆ ಅ೦ತ ಪಕ್ಕದಲ್ಲಿದ್ದವರನ್ನು ಕೇಳಿದಾಗ "ಬಾಲ್ಕನಿ ಟಿಕೆಟ್ ಆಗಲೇ ಕೊಟ್ಟು ಆಗಿದೆ. ಹೌಸ್‍ಫುಲ್ ಆಗಿದೆ" ಅ೦ದಾಗ ಆಶ್ಚರ್ಯ ಆಯಿತು. ಯಾವತ್ತೂ ಆ ಹೊತ್ತಿನ ಶೋ ಹೌಸ್‍ಫುಲ್ ಆಗಿರುವುದು ಕಡಿಮೆ. ಸರಿ ಎಲ್ಲರೂ ಹಿ೦ದೆ ಹೋಗೋಣ ಎ೦ದು ಯೋಚಿಸುತ್ತಿರುವಾಗ ನಾನು ಅ೦ದೆ. "ಹೇಗೂ ಬ೦ದಾಗಿದೆ.... ಫಸ್ಟ್ ಕ್ಲಾಸ್ ಟ್ರೈ ಮಾಡೋಣ...." ಎ೦ದು ಎಲ್ಲರನ್ನೂ ಒಪ್ಪಿಸಿ, ಸೈಜಿನಲ್ಲಿ ದೊಡ್ಡದಿರುವ ಸೆ೦ಥಿಲ್ ಅನ್ನು ಟಿಕೆಟು ಕೊಳ್ಳಲು ಕಳಿಸಿದೆವು. ಸೆ೦ಥಿಲ್ ತಮಿಳು ಹುಡುಗ. "ಚ೦ದ್ರಮುಖಿ" ಯ ಎರಡನೇ ಭಾಗ ಅ೦ತ ಪಿ.ಜಿ.ಯಲ್ಲಿ ಯಾರೋ ಹೇಳಿದ್ದರಿ೦ದ ಕನ್ನಡ ಸಿನಿಮಾವಾದರೂ ಪರವಾಗಿಲ್ಲ ಎ೦ದು ಬ೦ದಿದ್ದ. ಸ...

ಉಲ್ಲಾಳ್ದಿ

(ಬಹಳ ಸಮಯದ ನಂತರ ಬರೆದ ಒಂದು ಕತೆ) ಗೇರುಬೀಜದ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುವ ಸುಮತಿಗೂ ರತ್ನ ಉಲ್ಲಾಳ್ದಿಗೂ ಮುಂಚಿನಿಂದಲೂ ದ್ವೇಷ ಅಂತೇನೂ ಇರಲಿಲ್ಲ. ಹಾಗೆ ನೋಡಿದರೆ ಸುಮತಿ ಕೆಲಸಕ್ಕೆ ಹೋಗುವ ದಾರಿ ಉಲ್ಲಾಳ್ದಿಯ ಮನೆಯ ಮುಂದೆಯೇ ಇದೆ. ಪ್ರತಿದಿನ ಕೆಲಸಕ್ಕೆ ಹೋಗುವಾಗ “ಉಲ್ಲಾಳ್ದಿ..... ಎಂಚ ಉಲ್ಲರ್” ಎ೦ದು ಕೇಳಿಯೇ ಹೋಗುತ್ತಾಳೆ ಸುಮತಿ. ಹೀಗಿದ್ದ ಅವರ ಸಂಬಂಧ ಹಳಸಲು ಹಲವು ಕಾರಣಗಳಿವೆ. ಇಲ್ಲಿ ರತ್ನಕ್ಕನನ್ನು ಉಲ್ಲಾಳ್ದಿ ಎಂದು ಕರೆದರೂ ಆಕೆ ಊರಿಗೆ ಯಜಮಾನ್ತಿ ಅಂತ ಏನು ಅಲ್ಲ. ತುಳುನಾಡಿನ ಹಳ್ಳಿಗಳಲ್ಲಿ ಸಾಕಷ್ಟು ಅನುಕೂಲಸ್ತರಾಗಿದ್ದು ಗೇಣಿಗೆ ಭೂಮಿ ಕೊಡುವ ಮನೆಯ ಯಜಮಾನ್ತಿಯನ್ನು ಉಲ್ಲಾಳ್ದಿ ಅಂತ ಕರೆಯುವ ವಾಡಿಕೆ ಇದೆ. ಆದರೆ ರತ್ನಕ್ಕ ಅಂತ ಶ್ರೀಮಂತ ಮನೆಯ ಯಜಮಾನ್ತಿ ಏನಲ್ಲ. ಹಾಗೆ ನೋಡಿದರೆ ರತ್ನಕ್ಕ ಆ ಊರಿನವರೇ ಅಲ್ಲ. ದೂರದ ಬ್ರಹ್ಮಾವರದಿಂದ ಈ ಊರಿಗೆ ಮದುವೆಯಾಗಿ ಬಂದ ಶೆಟ್ಟರ ಹೆಣ್ಣು ಮಗಳು. ಆ ಹಳ್ಳಿಯಲ್ಲಿ ಅನೇಕ ಶೆಡ್ತೀರು ಉಲ್ಲಾಳ್ದಿ ಎ೦ದು ಕರೆಸಲ್ಪಡುತ್ತಿದ್ದುದನ್ನು ನೋಡಿ ತನ್ನನ್ನೂ ಉಲ್ಲಾಳ್ದಿ ಎ೦ದು ಕರೆದರೆ ಚೆನ್ನಾಗಿತ್ತು ಅಂತ ರತ್ನಕ್ಕನಿಗೆ ತು೦ಬಾ ಸಲ ಅನಿಸಿದ್ದಿದೆ. ಆದರೆ ಆ ಹಳ್ಳಿಯಲ್ಲಿ ಉಲ್ಲಾಳ್ದಿ ಎಂದು ಕರೆಯಲ್ಪಡುತ್ತಿದ್ದ ಶೆಡ್ತೀರು ಆ ಹಳ್ಳಿಯಲ್ಲಿಯೇ ಹುಟ್ಟಿ ಬೆಳೆದು ಮದುವೆಯಾಗಿ ಅಲ್ಲೇ ತಳವೂರಿದವರು. ಮನೆಯ ಹಾಗೂ ಜಮೀನಿನ ಯಜಮಾನಿಕೆ ನಡೆಸುತ್ತಿದ್ದ ಗತ್ತಿನ ಶೆಡ್ತೀರು ಅವರು. ಅವರದ್ದು ಅಳಿಯ ...