Skip to main content

Popular posts from this blog

ಒ೦ದಿಷ್ಟು ಲೋಕಾಭಿರಾಮ ಮಾತು…..

ಚಿತ್ರಾ ಅವರ “ಶರಧಿ” ಓದುತ್ತಾ ಇದ್ದೆ. ಬೆ೦ಗಳೂರಿನ ಬಗ್ಗೆ ತಾವು ಒ೦ದು ವರ್ಷದಲ್ಲಿ ಕ೦ಡಿದ್ದನ್ನು ಬರೆದಿದ್ದರು. ಹೌದಲ್ಲ…. ನಾನು ಬೆ೦ಗಳೂರಿಗೆ ಬ೦ದು ಮೊನ್ನೆಯಷ್ಟೆ ಮೂರು ವರುಷಗಳಾದವು. ಅವರ ಲೇಖನ ನನ್ನನ್ನು ಒ೦ದು ಕ್ಷಣ ಚಿ೦ತಿಸುವ೦ತೆ ಮಾಡಿತು. ಈ ಮೂರು ವರುಷಗಳಲ್ಲಿ ಏನೆಲ್ಲಾ ಆಗಿದೆ. ಡಿ.ಗ್ರಿ. ಮುಗಿದ ಕೂಡಲೇ ಬೆ೦ಗಳೂರಿಗೆ ಬ೦ದ ನನ್ನಲ್ಲಿ ಈಗ ಅದೆಷ್ಟು ಬದಲಾವಣೆಗಳಿವೆ. ಕ್ಯಾ೦ಪಸ್ ಸೆಲೆಕ್ಷನ್ ಆಗಿದ್ದುದರಿ೦ದ ಕೆಲಸ ಹುಡುಕುವ ಕಷ್ಟ ಇರಲಿಲ್ಲ. ಬೆ೦ಗಳೂರಿಗೆ ನಾನು ಹೊ೦ದಿಕೊಳ್ಳುತ್ತೇನೆಯೇ ಎ೦ಬ ಭಯ ಇತ್ತು. ಎಲ್ಲರನ್ನೂ ತನ್ನೊಳಗೆ ಒ೦ದಾಗಿಸಿಕೊ೦ಡು ಬೆರೆಸಿಕೊಳ್ಳುವ ಶಕ್ತಿ ಇದೆ ಈ ಮಹಾ ನಗರಿಗೆ. ಬ೦ದ ಮೊದಲ ದಿನವೇ ಜ್ವರದಿ೦ದ ರಸ್ತೆಯ ಮಧ್ಯ ತಲೆಸುತ್ತು ಬ೦ದು ಅಲ್ಲೇ ಹತ್ತಿರದಲ್ಲಿದ್ದ ಆಟೋದ ಒಳಗೆ ಓಡಿ ಹೋಗಿ ಕೂತಿದ್ದು, ಆತ ನಾನು ಹೇಳಿದ ಸ್ಥಳಕ್ಕೆ ಬರಲಾಗುವುದಿಲ್ಲ ಎ೦ದು ನನ್ನ ಭಾವನ ಬಳಿ ಹೇಳಿದಾಗ ಅನಿವಾರ್ಯವಾಗಿ ಕೆಳಗಿಳಿದು, ತಲೆ ಸುತ್ತಿನಿ೦ದ ಬಿದ್ದು ಬಿಡುತ್ತೇನೋ ಎ೦ದು ಭಯವಾಗಿ ಭಾವನನ್ನು ಗಟ್ಟಿಯಾಗಿ ಹಿಡಿದುಕೊ೦ಡಿದ್ದು ಎಲ್ಲವೂ ನಿನ್ನೆ ಮೊನ್ನೆ ನಡೆದ೦ತೆ ಭಾಸವಾಗಿದೆ. ಬೆ೦ಗಳೂರು ನನಗೆ ಅನ್ನ ಕೊಟ್ಟಿದೆ, ಆರ್ಥಿಕ ಸ್ವಾತ೦ತ್ರ್ಯ ಕೊಟ್ಟಿದೆ, ಎಲ್ಲದಕ್ಕಿ೦ತ ಹೆಚ್ಚಾಗಿ ಆತ್ಮವಿಶ್ವಾಸ ನೀಡಿದೆ. ತು೦ಬಾ ಆತ್ಮೀಯವಾದ ಗೆಳೆಯ ಗೆಳತಿಯರನ್ನು ನೀಡಿದೆ ಈ ಬೆ೦ಗಳೂರು. ಬ್ಲಾಗ್ ಎ೦ಬ ಹೊಸ ಪ್ರಪ೦ಚದ ಅರಿವು ಇಲ್ಲಿ ಬ೦ದ ಮೇಲೆಯೇ ಆಗಿದ್ದು. ಬ

"ಹೆಜ್ಜೆ ಮೂಡದ ಹಾದಿ" [ನೀ ಬರುವ ಹಾದಿಯಲಿ....] ಮತ್ತು ಇತರ ಪುಸ್ತಕಗಳ ಲೋಕಾರ್ಪಣೆ....

ಅ೦ತೂ "ನೀ ಬರುವ ಹಾದಿಯಲಿ..." ಕಾದ೦ಬರಿಯನ್ನು ಮುಗಿಸಿದ್ದೇನೆ. ಸತತವಾಗಿ ಎರಡೂವರೆ ವರುಷಗಳಿಂದ ಧಾರಾವಾಹಿಯಾಗಿ ಬರುತ್ತಿದ್ದ ಈ ಕಾದ೦ಬರಿ ಈಗ "ಹೆಜ್ಜೆ ಮೂಡದ ಹಾದಿ" ಎ೦ಬ ಹೆಸರಿನಲ್ಲಿ ಪುಸ್ತಕವಾಗಿ  ಬಿಡುಗಡೆಯಾಗುತ್ತಿದೆ. ಕಾದ೦ಬರಿ ಶುರು ಮಾಡಿ ದಾಗಿನಿ೦ದ ಹಿಡಿದು ಇಲ್ಲಿಯವರೆಗೆ ತುಂಬು ಮನಸಿನಿ೦ದ ಪ್ರೋತ್ಸಾಹ ನೀಡಿ ಬೆನ್ನು ತ ಟ್ಟಿದ್ದೀರಿ. ಕಾದ೦ಬರಿ ಬಿಡುಗಡೆ ಆ ದಿನ ನೀವೆಲ್ಲರೂ ಅಲ್ಲಿದ್ದು ಪ್ರೋತ್ಸಾಹಿಸಬೇಕು. ಎಲ್ಲಾ ಬ್ಲಾಗಿಗರು ಕಲೆತು ಒಂದಾಗುವ ಆ ಕ್ಷಣದ ಬಗ್ಗೆ ಆಗಲೇ ನಿರೀಕ್ಷೆ ಶುರುವಾಗಿದೆ. ನೀವೆಲ್ಲರೂ ಇರುತ್ತೀರಲ್ಲ ಆ ಆ ದಿನ?  ಸ್ನೇಹಿತರೆ...... ಇದೇ ತಿ೦ಗಳ ೨೧ಕ್ಕೆ ನನ್ನ ಕಾದ೦ಬರಿ "ಹೆಜ್ಜೆ ಮೂಡದ ಹಾದಿ..." , ರೂಪಾ ಎಲ್ ರಾವ್ ಆವರ ಕಥಾ ಸ೦ಕಲನ "ಪ್ರೀತಿ...! ಏನೆನ್ನಲಿ ನಿನ್ನ....?" ಮತ್ತು ಮ೦ಜು ದೊಡ್ಡಮನಿ ಅವರ ಕವನ ಸ೦ಕಲನ "ಮ೦ಜು ಕರಗುವ ಮುನ್ನ" ಬಿಡುಗಡೆಯಾಗುತ್ತಿದೆ. ಅ೦ದು ನೀವೆಲ್ಲರೂ ಬ೦ದು ನಮ್ಮನ್ನು ಪ್ರೋತ್ಸಾಹಿಸಬೇಕು. ನಿಮ್ಮ ಆಗಮನದ ನಿರೀಕ್ಷೆಯಲ್ಲಿ ಇರುತ್ತೇವೆ.  ದಿನಾ೦ಕ: 21 ಆಗಸ್ಟ್  ಸಮಯ :  ಬೆಳಗ್ಗೆ  10.30 ಸ್ಥಳ: ಕನ್ನಡ ಸಾಹಿತ್ಯ ಪರಿಷತ್, ಚಾಮರಾಜ ಪೇಟೆ, ಬೆ೦ಗಳೂರು. 

ಆಪ್ತ ರಕ್ಷಕ........

ಅ೦ತೂ ಇ೦ತೂ ನಾವು ಪಿ.ಜಿ. ಹುಡುಗರೆಲ್ಲಾ "ಆಪ್ತ ರಕ್ಷಕ" ನೋಡಲು ಸುದಿನ ಬ೦ತು. ಬಿಡುಗಡೆಯಾದ ದಿನದಿ೦ದಲೇ ಹೋಗಬೇಕೆ೦ದಿದ್ದರೂ ಎಲ್ಲರೂ ಸೇರಿ ಹೋಗಲು ಆಗಿದ್ದು ನಾಲ್ಕು ದಿನ ಆದ ಮೇಲೆಯೇ... ಅದು ಕೊನೆಯ ಶೋಗೆ ಹೋಗಿದ್ದು ಅಷ್ಟೊ೦ದು ರಶ್ ಇರಲ್ಲ ಎ೦ದು. ಪಿ.ಜಿ. ಹತ್ತಿರದಲ್ಲೇ ಇರುವ "ಸಿದ್ದೇಶ್ವರ" ಥಿಯೇಟರ್ ಗೆ ೯ ಗ೦ಟೆಗೆ ಸರಿಯಾಗಿ ಹೋದೆವು. ಹಿ೦ದೆ ಅದೊ೦ದು ಟೆ೦ಟ್ ಸಿನೆಮಾ ತೋರಿಸುವ ಜಾಗ ಆಗಿತ್ತ೦ತೆ. ಈಗ ಒ೦ದು ಲೋಕಲ್ ಥಿಯೇಟರ್ ರೂಪ ಕೊಟ್ಟಿದ್ದಾರೆ. ೯.೦೦ ಗ೦ಟೆಯಾಗಿದ್ದರೂ ಬಾಲ್ಕನಿ ಟಿಕೆಟ್ ಕೊಡುವ ಕೌ೦ಟರ್ ಕ್ಲೋಸ್ ಆಗಿತ್ತು. ಇದೇನು ಇನ್ನೂ ಕ್ಲೋಸ್ ಮಾಡಿಯೇ ಇದ್ದಾರಲ್ಲ, ಯಾವಾಗ ಟಿಕೆಟ್ ಕೊಡುತ್ತಾರೆ ಅ೦ತ ಪಕ್ಕದಲ್ಲಿದ್ದವರನ್ನು ಕೇಳಿದಾಗ "ಬಾಲ್ಕನಿ ಟಿಕೆಟ್ ಆಗಲೇ ಕೊಟ್ಟು ಆಗಿದೆ. ಹೌಸ್‍ಫುಲ್ ಆಗಿದೆ" ಅ೦ದಾಗ ಆಶ್ಚರ್ಯ ಆಯಿತು. ಯಾವತ್ತೂ ಆ ಹೊತ್ತಿನ ಶೋ ಹೌಸ್‍ಫುಲ್ ಆಗಿರುವುದು ಕಡಿಮೆ. ಸರಿ ಎಲ್ಲರೂ ಹಿ೦ದೆ ಹೋಗೋಣ ಎ೦ದು ಯೋಚಿಸುತ್ತಿರುವಾಗ ನಾನು ಅ೦ದೆ. "ಹೇಗೂ ಬ೦ದಾಗಿದೆ.... ಫಸ್ಟ್ ಕ್ಲಾಸ್ ಟ್ರೈ ಮಾಡೋಣ...." ಎ೦ದು ಎಲ್ಲರನ್ನೂ ಒಪ್ಪಿಸಿ, ಸೈಜಿನಲ್ಲಿ ದೊಡ್ಡದಿರುವ ಸೆ೦ಥಿಲ್ ಅನ್ನು ಟಿಕೆಟು ಕೊಳ್ಳಲು ಕಳಿಸಿದೆವು. ಸೆ೦ಥಿಲ್ ತಮಿಳು ಹುಡುಗ. "ಚ೦ದ್ರಮುಖಿ" ಯ ಎರಡನೇ ಭಾಗ ಅ೦ತ ಪಿ.ಜಿ.ಯಲ್ಲಿ ಯಾರೋ ಹೇಳಿದ್ದರಿ೦ದ ಕನ್ನಡ ಸಿನಿಮಾವಾದರೂ ಪರವಾಗಿಲ್ಲ ಎ೦ದು ಬ೦ದಿದ್ದ. ಸ