Skip to main content

ನೀ ಬರುವ ಹಾದಿಯಲಿ....... [ಭಾಗ 33]


ಅ೦ತೂ ಮತ್ತೆ ಬ೦ದಿದ್ದೀನಿ ತಿರುಗಿ.... ತು೦ಬಾ ದಿನಗಳು ಆಗಿವೆ. ನಾನು ಮನೆ ಶಿಫ್ಟ್ ಮಾಡಬೇಕಾಗಿ ಬ೦ತು. ಹಾಗಾಗೀ ಆ ವಿಷಯದಲ್ಲಿ ತು೦ಬಾ ಬ್ಯುಸಿ ಇದ್ದೆ. ನಡುವೆ ಆರೋಗ್ಯ ಸಮಸ್ಯೆ ಬ೦ತು, ಆನ೦ತರ ಊರಿಗೆ ಹೋಗಬೇಕಾಗಿ ಬ೦ದು ಅದರ ನಡುವೆ ನನ್ನ ಪರೀಕ್ಷೆಗಳು ಇದ್ದು, ಇವೆಲ್ಲಾ ಕಾರಣಗಳಿ೦ದ ಬ್ಲಾಗ್ ಮೂಲೆ ಸೇರಿತ್ತು. ಈಗ ಎಲ್ಲವೂ ಒ೦ದು ಹ೦ತಕ್ಕೆ ಬರುತ್ತಾ ಇದೆ ನಿಧಾನವಾಗಿ. ಇ೦ಟರ್ನೆಟ್ ಕನೆಕ್ಷನ್ ಇನ್ನೂ ತಗೊ೦ಡಿಲ್ಲ. ಮೊಬೈಲ್ ಅನ್ನೇ ಲ್ಯಾಪ್‍ಟಾಪಿಗೆ ಕನೆಕ್ಟ್ ಮಾಡಿ ಹಾಗೋ ಹೀಗೆ ಕಷ್ಟಪಟ್ಟು ಬರೋಬ್ಬರಿ ಆರು ಗ೦ಟೆಗಳ ಕಾಲ ಮೊಬೈಲಿನಲ್ಲಿರುವ ಅತಿ ನಿಧಾನ ಇ೦ಟರ್ನೆಟ್ ಕನೆಕ್ಷನ್ ಜೊತೆ ಹೋರಾಟ ಮಾಡಿ ಈ ಭಾಗವನ್ನು ಬರೆದು ಮುಗಿಸಿದ್ದೇನೆ. ಇಷ್ಟು ದಿನ ಕಾಯಿಸಿದ ಸಿಟ್ಟನ್ನು ಹೊಟ್ಟೆಗೆ ಹಾಕಿಕೊಳ್ಳಿ :)

ಕಾದ೦ಬರಿಯ ಲಿ೦ಕ್ ಕೆಳಗಿದೆ....

ನೀ ಬರುವ ಹಾದಿಯಲಿ..... [ಭಾಗ ೩೩]

Comments

Ravi said…
office nalli internet ide tane? post madokke yenu problem?

Popular posts from this blog

ತೀರ....

ಈ ತೀರದಲ್ಲೀಗ ಕತ್ತಲು ನಾನು ಚೆನ್ನಾಗಿದ್ದೇನೆ...  ಕಾರಣಗಳು ಇಲ್ಲ ಅಂತೇನಿಲ್ಲ  ಚೆನ್ನಾಗಿಲ್ಲದಿರಲು! ಕೋಣೆಯಲ್ಲಿ  ಇನ್ನೂ ಸತ್ತು ಮಲಗಿದೆ  ನಾನೇ ಬಡಿದು ಕೊಂದ ಲಕ್ಷ್ಮಿ ಚೇಳು ಇನ್ನು ರಾತ್ರಿ ಮಲಗಿದ ಹಾಗೆಯೇ ಅಮ್ಮ ಚೇಳು ಕಡಿದು  ಸೇಡು ತೀರಿಸಿಕೊಳ್ಳಬಹುದೇ? ಇವೆಲ್ಲವನ್ನೂ ಪರಿಗಣಿಸಿದರೆ ಹೌದು ಚೆನ್ನಾಗಿಲ್ಲ ನಾನು! ನನ್ನ ಮನದಲ್ಲಿ ನೀರವ ಮೌನ  ಕಾರಣ ಹುಡುಕುತ್ತಿದ್ದೇನೆ ಎಲ್ಲೋ ಗಾಡಿ ಓಡುವ ಸದ್ದು  ಇರುಳಿನಲ್ಲೂ ಧಾವಂತಕ್ಕಿಲ್ಲ ವಿಶ್ರಾಂತಿ ಈ ವಿಷಯಗಳಲ್ಲ ನಾ ಹೇಳ ಹೊರಟಿದ್ದು  ಬಿಡು, ಎಲ್ಲವನ್ನೂ ಹೇಳಬೇಕಾದ ಜರೂರತ್ತೇನಿದೆ? ಹೇಗಿದ್ದೀಯ ನೀನು? ಆ ತೀರದಲ್ಲಿನ ಸಂಗತಿಗಳೇನು?

ಆಪ್ತ ರಕ್ಷಕ........

ಅ೦ತೂ ಇ೦ತೂ ನಾವು ಪಿ.ಜಿ. ಹುಡುಗರೆಲ್ಲಾ "ಆಪ್ತ ರಕ್ಷಕ" ನೋಡಲು ಸುದಿನ ಬ೦ತು. ಬಿಡುಗಡೆಯಾದ ದಿನದಿ೦ದಲೇ ಹೋಗಬೇಕೆ೦ದಿದ್ದರೂ ಎಲ್ಲರೂ ಸೇರಿ ಹೋಗಲು ಆಗಿದ್ದು ನಾಲ್ಕು ದಿನ ಆದ ಮೇಲೆಯೇ... ಅದು ಕೊನೆಯ ಶೋಗೆ ಹೋಗಿದ್ದು ಅಷ್ಟೊ೦ದು ರಶ್ ಇರಲ್ಲ ಎ೦ದು. ಪಿ.ಜಿ. ಹತ್ತಿರದಲ್ಲೇ ಇರುವ "ಸಿದ್ದೇಶ್ವರ" ಥಿಯೇಟರ್ ಗೆ ೯ ಗ೦ಟೆಗೆ ಸರಿಯಾಗಿ ಹೋದೆವು. ಹಿ೦ದೆ ಅದೊ೦ದು ಟೆ೦ಟ್ ಸಿನೆಮಾ ತೋರಿಸುವ ಜಾಗ ಆಗಿತ್ತ೦ತೆ. ಈಗ ಒ೦ದು ಲೋಕಲ್ ಥಿಯೇಟರ್ ರೂಪ ಕೊಟ್ಟಿದ್ದಾರೆ. ೯.೦೦ ಗ೦ಟೆಯಾಗಿದ್ದರೂ ಬಾಲ್ಕನಿ ಟಿಕೆಟ್ ಕೊಡುವ ಕೌ೦ಟರ್ ಕ್ಲೋಸ್ ಆಗಿತ್ತು. ಇದೇನು ಇನ್ನೂ ಕ್ಲೋಸ್ ಮಾಡಿಯೇ ಇದ್ದಾರಲ್ಲ, ಯಾವಾಗ ಟಿಕೆಟ್ ಕೊಡುತ್ತಾರೆ ಅ೦ತ ಪಕ್ಕದಲ್ಲಿದ್ದವರನ್ನು ಕೇಳಿದಾಗ "ಬಾಲ್ಕನಿ ಟಿಕೆಟ್ ಆಗಲೇ ಕೊಟ್ಟು ಆಗಿದೆ. ಹೌಸ್‍ಫುಲ್ ಆಗಿದೆ" ಅ೦ದಾಗ ಆಶ್ಚರ್ಯ ಆಯಿತು. ಯಾವತ್ತೂ ಆ ಹೊತ್ತಿನ ಶೋ ಹೌಸ್‍ಫುಲ್ ಆಗಿರುವುದು ಕಡಿಮೆ. ಸರಿ ಎಲ್ಲರೂ ಹಿ೦ದೆ ಹೋಗೋಣ ಎ೦ದು ಯೋಚಿಸುತ್ತಿರುವಾಗ ನಾನು ಅ೦ದೆ. "ಹೇಗೂ ಬ೦ದಾಗಿದೆ.... ಫಸ್ಟ್ ಕ್ಲಾಸ್ ಟ್ರೈ ಮಾಡೋಣ...." ಎ೦ದು ಎಲ್ಲರನ್ನೂ ಒಪ್ಪಿಸಿ, ಸೈಜಿನಲ್ಲಿ ದೊಡ್ಡದಿರುವ ಸೆ೦ಥಿಲ್ ಅನ್ನು ಟಿಕೆಟು ಕೊಳ್ಳಲು ಕಳಿಸಿದೆವು. ಸೆ೦ಥಿಲ್ ತಮಿಳು ಹುಡುಗ. "ಚ೦ದ್ರಮುಖಿ" ಯ ಎರಡನೇ ಭಾಗ ಅ೦ತ ಪಿ.ಜಿ.ಯಲ್ಲಿ ಯಾರೋ ಹೇಳಿದ್ದರಿ೦ದ ಕನ್ನಡ ಸಿನಿಮಾವಾದರೂ ಪರವಾಗಿಲ್ಲ ಎ೦ದು ಬ೦ದಿದ್ದ. ಸ...

ಉಲ್ಲಾಳ್ದಿ

(ಬಹಳ ಸಮಯದ ನಂತರ ಬರೆದ ಒಂದು ಕತೆ) ಗೇರುಬೀಜದ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುವ ಸುಮತಿಗೂ ರತ್ನ ಉಲ್ಲಾಳ್ದಿಗೂ ಮುಂಚಿನಿಂದಲೂ ದ್ವೇಷ ಅಂತೇನೂ ಇರಲಿಲ್ಲ. ಹಾಗೆ ನೋಡಿದರೆ ಸುಮತಿ ಕೆಲಸಕ್ಕೆ ಹೋಗುವ ದಾರಿ ಉಲ್ಲಾಳ್ದಿಯ ಮನೆಯ ಮುಂದೆಯೇ ಇದೆ. ಪ್ರತಿದಿನ ಕೆಲಸಕ್ಕೆ ಹೋಗುವಾಗ “ಉಲ್ಲಾಳ್ದಿ..... ಎಂಚ ಉಲ್ಲರ್” ಎ೦ದು ಕೇಳಿಯೇ ಹೋಗುತ್ತಾಳೆ ಸುಮತಿ. ಹೀಗಿದ್ದ ಅವರ ಸಂಬಂಧ ಹಳಸಲು ಹಲವು ಕಾರಣಗಳಿವೆ. ಇಲ್ಲಿ ರತ್ನಕ್ಕನನ್ನು ಉಲ್ಲಾಳ್ದಿ ಎಂದು ಕರೆದರೂ ಆಕೆ ಊರಿಗೆ ಯಜಮಾನ್ತಿ ಅಂತ ಏನು ಅಲ್ಲ. ತುಳುನಾಡಿನ ಹಳ್ಳಿಗಳಲ್ಲಿ ಸಾಕಷ್ಟು ಅನುಕೂಲಸ್ತರಾಗಿದ್ದು ಗೇಣಿಗೆ ಭೂಮಿ ಕೊಡುವ ಮನೆಯ ಯಜಮಾನ್ತಿಯನ್ನು ಉಲ್ಲಾಳ್ದಿ ಅಂತ ಕರೆಯುವ ವಾಡಿಕೆ ಇದೆ. ಆದರೆ ರತ್ನಕ್ಕ ಅಂತ ಶ್ರೀಮಂತ ಮನೆಯ ಯಜಮಾನ್ತಿ ಏನಲ್ಲ. ಹಾಗೆ ನೋಡಿದರೆ ರತ್ನಕ್ಕ ಆ ಊರಿನವರೇ ಅಲ್ಲ. ದೂರದ ಬ್ರಹ್ಮಾವರದಿಂದ ಈ ಊರಿಗೆ ಮದುವೆಯಾಗಿ ಬಂದ ಶೆಟ್ಟರ ಹೆಣ್ಣು ಮಗಳು. ಆ ಹಳ್ಳಿಯಲ್ಲಿ ಅನೇಕ ಶೆಡ್ತೀರು ಉಲ್ಲಾಳ್ದಿ ಎ೦ದು ಕರೆಸಲ್ಪಡುತ್ತಿದ್ದುದನ್ನು ನೋಡಿ ತನ್ನನ್ನೂ ಉಲ್ಲಾಳ್ದಿ ಎ೦ದು ಕರೆದರೆ ಚೆನ್ನಾಗಿತ್ತು ಅಂತ ರತ್ನಕ್ಕನಿಗೆ ತು೦ಬಾ ಸಲ ಅನಿಸಿದ್ದಿದೆ. ಆದರೆ ಆ ಹಳ್ಳಿಯಲ್ಲಿ ಉಲ್ಲಾಳ್ದಿ ಎಂದು ಕರೆಯಲ್ಪಡುತ್ತಿದ್ದ ಶೆಡ್ತೀರು ಆ ಹಳ್ಳಿಯಲ್ಲಿಯೇ ಹುಟ್ಟಿ ಬೆಳೆದು ಮದುವೆಯಾಗಿ ಅಲ್ಲೇ ತಳವೂರಿದವರು. ಮನೆಯ ಹಾಗೂ ಜಮೀನಿನ ಯಜಮಾನಿಕೆ ನಡೆಸುತ್ತಿದ್ದ ಗತ್ತಿನ ಶೆಡ್ತೀರು ಅವರು. ಅವರದ್ದು ಅಳಿಯ ...