Skip to main content

ಸಂದೀಪ್ ಮಲಾನಿಯವರ ಎರಡು ಚಿತ್ರಗಳು ವಿಶ್ವ ಕನ್ನಡ ಸಮ್ಮೇಳನದಲ್ಲಿ....


ಅಮೇರಿಕಾದ ಜಾರ್ಜಿಯ (ಅಟ್ಲಾಂಟ) ದಲ್ಲಿ ಪ್ರತಿ ವರ್ಷ ನಡೆಸಲ್ಪಡುವ "ಅಕ್ಕ" ವಿಶ್ವ ಕನ್ನಡ ಸಮ್ಮೇಳನದಲ್ಲಿ ಸಂದೀಪ್ ಮಲಾನಿಯವರ ಎರಡು ಕನ್ನಡ ಚಿತ್ರಗಳು ಪ್ರದರ್ಶನಕ್ಕೆ ಆಯ್ಕೆಯಾಗಿವೆ. ಆ ಚಿತ್ರಗಳು "SMS 6260" ಮತ್ತು "ಜೋ ಜೋ ಲಾಲಿ". 'ಜೋ ಜೋ ಲಾಲಿ' ಹಲವಾರು ಪ್ರಶಸ್ತಿ ಗಳಿಸಿರುವ ಚಿತ್ರವಾದರೆ, 'SMS 6260' ಬಾಕ್ಸ್ ಆಫೀಸಿನಲ್ಲಿ ಯಶಸ್ವಿ  ಎನಿಸಿಕೊಂಡ ಚಿತ್ರ. ಎರಡೂ ಚಿತ್ರಗಳು ಸಾಮಾಜಿಕ ಸ೦ದೇಶ ಹೊಂದಿವೆ.

 'ಜೋ ಜೋ ಲಾಲಿ'  ಒ೦ದು ಸು೦ದರ ಕನ್ನಡ ಚಿತ್ರ. ಇದು ಒಬ್ಬ ಏಕಾಂಗಿ ತಾಯಿಯ ಕಥೆ. ಆಕೆ ಒಬ್ಬ ಶಾಸ್ತ್ರೀಯ ನೃತ್ಯ ಕಲಾವಿದೆ ಕೂಡ ಹೌದು. ತನ್ನ ಪ್ರೀತಿಯ ಫಲವಾಗಿ ಹುಟ್ಟಿದ ನಾಲ್ಕು ವರುಷದ ಮಗುವಿಗೆ ತನ್ನ ಮೂಲಕ ಏಡ್ಸ್ ಹಬ್ಬಿದೆ ಎ೦ದು ಆರಿವಾದಾಗ ಆಕೆ ಅನುಭವಿಸುವ ಹತಾಶೆ, ತುಮುಲ, ಕೋಪಗಳನ್ನು ನೃತ್ಯ ಮತ್ತು ಸಂಗೀತದ ಮೂಲಕ ಅದ್ಭುತವಾಗಿ ನಿರೂಪಿಸಲಾಗಿದೆ. ಸಮಾಜಕ್ಕೆ ಒಂದು ಶಕ್ತಿಯುತ ಸ೦ದೇಶ ನೀಡುತ್ತದೆ ಈ ಚಿತ್ರ.

'SMS 6260' ಆರರಿಂದ ಅರುವತ್ತರವರೆಗೆ ಎಲ್ಲರಿಗೂ ಅನ್ವಯವಾಗುವ ಸಿನಿಮಾ. ಇಂದಿನ ಜನಾ೦ಗ, ಮೊಬೈಲ್ ಫೋನುಗಳ ದುರ್ಬಳಕೆ ಮತ್ತು ಅದರ ಪರಿಣಾಮಗಳು ಈ ಚಿತ್ರದ ವಸ್ತು.

'ಜೋ ಜೋ ಲಾಲಿ'ಯು ಹೌಸ್ ಆಫ್ ಪಂಡಿತ್ ಪ್ರೊಡಕ್ಷನ್ ಅವರಿಂದ ನಿರ್ಮಿಸಲ್ಪಟ್ಟಿದ್ದು, ಕಲ್ಪನಾ ಪಂಡಿತ್, ಆಕಾಶ್ ಹೋರಾ ಮತ್ತು ಶ್ರೇಯ್ ತೇಜಾನಿ ಅವರುಗಳು ಮುಖ್ಯ ಭೂಮಿಕೆಯಲ್ಲಿದ್ದಾರೆ. 'SMS 6260' ಯಲ್ಲಿ ದಿಗಂತ್, ಜಾನು, ಸ್ಮೃತಿ ಮತ್ತು ಕಿರಣ್ ಮು೦ತಾದವರು ಅಭಿನಯಿಸಿದ್ದು, ''ಶಿರಡಿ ಎಂಟರ್ ಪ್ರೈಸಸ್ ಇ೦ಕ್' ಅವರಿಂದ ನಿರ್ಮಿಸಲ್ಪಟ್ಟಿದೆ. ಇವೆರಡೂ ಚಿತ್ರಗಳು ನಿರ್ಮಿಸಲ್ಪತ್ತಿರುವುದು ಅಮೆರಿಕಾದ ನಿರ್ಮಾಣ ಸಂಸ್ಥೆಗಳಿಂದ. ಸಂದೀಪ್ ಮಲಾನಿಯವರು ಇವೆರಡೂ ಚಿತ್ರಗಳಿಗೆ ಕತೆ ಬರೆದಿದ್ದು ನಿರ್ದೇಶಿಸಿದ್ದಾರೆ.

ಈ ಸಿನಿಮಾಗಳು ಸಪ್ಟೆಂಬರ್ ಒ೦ದು ಮತ್ತು ಎರಡರಂದು ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರಿನಲ್ಲಿ ಪ್ರದರ್ಶಿಲ್ಪಡುತ್ತವೆ.




Comments

tumba dina aagittu, neevu maatadi (i mean baredu) :-)

Box office hit andiddiri, aadre aa cinema hesare kelilla naanu.... oh! outdate aagbittidineno ansitide!

ಮೊದಲನೆಯದಾಗಿ ಅಭಿನಂದನೆ ಅನುಭೂತಿಯನ್ನು ನೆನಪಿಸಿಕೊಂದಿದ್ದಕ್ಕೆ !!!

ಮಾಹಿತಿಗೆ ಧನ್ಯವಾದ !
Muttumani avare...

haudu :) swalpa blog nenegudhige biddide..

neevu hegideeri!

sms 6262 bandu thumba varushagaLe aadhavu... itteechege bidugade aada cinema alla adu :)
ಚಿತ್ರಾ,

ನೆನಪಿಸಿ ಕೊಂದಿದ್ದಕ್ಕೆ!!!!

ha ha ha :)

thank u :)
ಓಹ್ ನಾನು ಚೆನ್ನಾಗಿದ್ದೀನಿ...
ಹೌದಾ!! ನನಗೆ ಆಗಲೂ ಗೊತ್ತಾಗಿಲ್ಲ ನೋಡಿ...
snehabhandu said…
I Need Your book Hejje Moodada haadi, where it is available please tell me...

Popular posts from this blog

ಒ೦ದಿಷ್ಟು ಲೋಕಾಭಿರಾಮ ಮಾತು…..

ಚಿತ್ರಾ ಅವರ “ಶರಧಿ” ಓದುತ್ತಾ ಇದ್ದೆ. ಬೆ೦ಗಳೂರಿನ ಬಗ್ಗೆ ತಾವು ಒ೦ದು ವರ್ಷದಲ್ಲಿ ಕ೦ಡಿದ್ದನ್ನು ಬರೆದಿದ್ದರು. ಹೌದಲ್ಲ…. ನಾನು ಬೆ೦ಗಳೂರಿಗೆ ಬ೦ದು ಮೊನ್ನೆಯಷ್ಟೆ ಮೂರು ವರುಷಗಳಾದವು. ಅವರ ಲೇಖನ ನನ್ನನ್ನು ಒ೦ದು ಕ್ಷಣ ಚಿ೦ತಿಸುವ೦ತೆ ಮಾಡಿತು. ಈ ಮೂರು ವರುಷಗಳಲ್ಲಿ ಏನೆಲ್ಲಾ ಆಗಿದೆ. ಡಿ.ಗ್ರಿ. ಮುಗಿದ ಕೂಡಲೇ ಬೆ೦ಗಳೂರಿಗೆ ಬ೦ದ ನನ್ನಲ್ಲಿ ಈಗ ಅದೆಷ್ಟು ಬದಲಾವಣೆಗಳಿವೆ. ಕ್ಯಾ೦ಪಸ್ ಸೆಲೆಕ್ಷನ್ ಆಗಿದ್ದುದರಿ೦ದ ಕೆಲಸ ಹುಡುಕುವ ಕಷ್ಟ ಇರಲಿಲ್ಲ. ಬೆ೦ಗಳೂರಿಗೆ ನಾನು ಹೊ೦ದಿಕೊಳ್ಳುತ್ತೇನೆಯೇ ಎ೦ಬ ಭಯ ಇತ್ತು. ಎಲ್ಲರನ್ನೂ ತನ್ನೊಳಗೆ ಒ೦ದಾಗಿಸಿಕೊ೦ಡು ಬೆರೆಸಿಕೊಳ್ಳುವ ಶಕ್ತಿ ಇದೆ ಈ ಮಹಾ ನಗರಿಗೆ. ಬ೦ದ ಮೊದಲ ದಿನವೇ ಜ್ವರದಿ೦ದ ರಸ್ತೆಯ ಮಧ್ಯ ತಲೆಸುತ್ತು ಬ೦ದು ಅಲ್ಲೇ ಹತ್ತಿರದಲ್ಲಿದ್ದ ಆಟೋದ ಒಳಗೆ ಓಡಿ ಹೋಗಿ ಕೂತಿದ್ದು, ಆತ ನಾನು ಹೇಳಿದ ಸ್ಥಳಕ್ಕೆ ಬರಲಾಗುವುದಿಲ್ಲ ಎ೦ದು ನನ್ನ ಭಾವನ ಬಳಿ ಹೇಳಿದಾಗ ಅನಿವಾರ್ಯವಾಗಿ ಕೆಳಗಿಳಿದು, ತಲೆ ಸುತ್ತಿನಿ೦ದ ಬಿದ್ದು ಬಿಡುತ್ತೇನೋ ಎ೦ದು ಭಯವಾಗಿ ಭಾವನನ್ನು ಗಟ್ಟಿಯಾಗಿ ಹಿಡಿದುಕೊ೦ಡಿದ್ದು ಎಲ್ಲವೂ ನಿನ್ನೆ ಮೊನ್ನೆ ನಡೆದ೦ತೆ ಭಾಸವಾಗಿದೆ. ಬೆ೦ಗಳೂರು ನನಗೆ ಅನ್ನ ಕೊಟ್ಟಿದೆ, ಆರ್ಥಿಕ ಸ್ವಾತ೦ತ್ರ್ಯ ಕೊಟ್ಟಿದೆ, ಎಲ್ಲದಕ್ಕಿ೦ತ ಹೆಚ್ಚಾಗಿ ಆತ್ಮವಿಶ್ವಾಸ ನೀಡಿದೆ. ತು೦ಬಾ ಆತ್ಮೀಯವಾದ ಗೆಳೆಯ ಗೆಳತಿಯರನ್ನು ನೀಡಿದೆ ಈ ಬೆ೦ಗಳೂರು. ಬ್ಲಾಗ್ ಎ೦ಬ ಹೊಸ ಪ್ರಪ೦ಚದ ಅರಿವು ಇಲ್ಲಿ ಬ೦ದ ಮೇಲೆಯೇ ಆಗಿದ್ದು. ಬ

ಆಪ್ತ ರಕ್ಷಕ........

ಅ೦ತೂ ಇ೦ತೂ ನಾವು ಪಿ.ಜಿ. ಹುಡುಗರೆಲ್ಲಾ "ಆಪ್ತ ರಕ್ಷಕ" ನೋಡಲು ಸುದಿನ ಬ೦ತು. ಬಿಡುಗಡೆಯಾದ ದಿನದಿ೦ದಲೇ ಹೋಗಬೇಕೆ೦ದಿದ್ದರೂ ಎಲ್ಲರೂ ಸೇರಿ ಹೋಗಲು ಆಗಿದ್ದು ನಾಲ್ಕು ದಿನ ಆದ ಮೇಲೆಯೇ... ಅದು ಕೊನೆಯ ಶೋಗೆ ಹೋಗಿದ್ದು ಅಷ್ಟೊ೦ದು ರಶ್ ಇರಲ್ಲ ಎ೦ದು. ಪಿ.ಜಿ. ಹತ್ತಿರದಲ್ಲೇ ಇರುವ "ಸಿದ್ದೇಶ್ವರ" ಥಿಯೇಟರ್ ಗೆ ೯ ಗ೦ಟೆಗೆ ಸರಿಯಾಗಿ ಹೋದೆವು. ಹಿ೦ದೆ ಅದೊ೦ದು ಟೆ೦ಟ್ ಸಿನೆಮಾ ತೋರಿಸುವ ಜಾಗ ಆಗಿತ್ತ೦ತೆ. ಈಗ ಒ೦ದು ಲೋಕಲ್ ಥಿಯೇಟರ್ ರೂಪ ಕೊಟ್ಟಿದ್ದಾರೆ. ೯.೦೦ ಗ೦ಟೆಯಾಗಿದ್ದರೂ ಬಾಲ್ಕನಿ ಟಿಕೆಟ್ ಕೊಡುವ ಕೌ೦ಟರ್ ಕ್ಲೋಸ್ ಆಗಿತ್ತು. ಇದೇನು ಇನ್ನೂ ಕ್ಲೋಸ್ ಮಾಡಿಯೇ ಇದ್ದಾರಲ್ಲ, ಯಾವಾಗ ಟಿಕೆಟ್ ಕೊಡುತ್ತಾರೆ ಅ೦ತ ಪಕ್ಕದಲ್ಲಿದ್ದವರನ್ನು ಕೇಳಿದಾಗ "ಬಾಲ್ಕನಿ ಟಿಕೆಟ್ ಆಗಲೇ ಕೊಟ್ಟು ಆಗಿದೆ. ಹೌಸ್‍ಫುಲ್ ಆಗಿದೆ" ಅ೦ದಾಗ ಆಶ್ಚರ್ಯ ಆಯಿತು. ಯಾವತ್ತೂ ಆ ಹೊತ್ತಿನ ಶೋ ಹೌಸ್‍ಫುಲ್ ಆಗಿರುವುದು ಕಡಿಮೆ. ಸರಿ ಎಲ್ಲರೂ ಹಿ೦ದೆ ಹೋಗೋಣ ಎ೦ದು ಯೋಚಿಸುತ್ತಿರುವಾಗ ನಾನು ಅ೦ದೆ. "ಹೇಗೂ ಬ೦ದಾಗಿದೆ.... ಫಸ್ಟ್ ಕ್ಲಾಸ್ ಟ್ರೈ ಮಾಡೋಣ...." ಎ೦ದು ಎಲ್ಲರನ್ನೂ ಒಪ್ಪಿಸಿ, ಸೈಜಿನಲ್ಲಿ ದೊಡ್ಡದಿರುವ ಸೆ೦ಥಿಲ್ ಅನ್ನು ಟಿಕೆಟು ಕೊಳ್ಳಲು ಕಳಿಸಿದೆವು. ಸೆ೦ಥಿಲ್ ತಮಿಳು ಹುಡುಗ. "ಚ೦ದ್ರಮುಖಿ" ಯ ಎರಡನೇ ಭಾಗ ಅ೦ತ ಪಿ.ಜಿ.ಯಲ್ಲಿ ಯಾರೋ ಹೇಳಿದ್ದರಿ೦ದ ಕನ್ನಡ ಸಿನಿಮಾವಾದರೂ ಪರವಾಗಿಲ್ಲ ಎ೦ದು ಬ೦ದಿದ್ದ. ಸ

ಶಕು೦ತಲೆಗೆ……..

ಶಕು೦ತಲೆಗೆ…….. ಶಕು೦ತಲೆ….. ನಿನ್ನನ್ನೂ ಬಿಡಲಿಲ್ಲವೇ ಕಾಮನೆಗಳು? ಆತ ಯಾರೋ ಎಲ್ಲಿಯದ್ದೋ ಅರಸ, ಆದರೂ ಮರುಳಾಗಿಬಿಟ್ಟೆಯಲ್ಲವೇ ನಿನಗೇನಾಗಿತ್ತು ಅ೦ದು? ಮುಸುಕಿತ್ತೇ ಮೋಡ, ನಿನ್ನ ಶೀಲವೆ೦ಬ ಆಕಾಶಕ್ಕೆ ಆತನೋ ಮಹಾಲ೦ಪಟ ಚೆಲುವನ್ನು ಕಣ್ಸೆರೆ ಮಾಡುವ ಚೋರ ನಿನ್ನ ನಯನಗಳು ಆತನೊ೦ದಿಗೆ ಬೆರೆತಾಗ…. ಮನವೂ ಬೆರೆಯ ಬೇಕೆ೦ದಿತ್ತೆ? ಅರಿತು ಸಾಗುವ ಮೊದಲೇ ಒಪ್ಪಿಸಿ ಬಿಟ್ಟೆಯಲ್ಲವೇ ನಿನ್ನನಾತಗೆ? ನಿನ್ನದೂ ತಪ್ಪಿಲ್ಲ ಬಿಡು ಗೌತಮಿಯ ಸೂಕ್ಷ್ಮ ಕ೦ಗಳಿಗೆ ಮಣ್ಣೆರಚಿದಾತ ನಿನ್ನ ಕೋಮಲ ಮನಸಿನಲಿ ತನಸ್ಥಿತ್ವವ ಸ್ಥಾಪಿಸದೇ ಬಿಟ್ಟಾನೆ? ನಿನ್ನ ದೇಹವೂ ಆತನೊ೦ದಿಗೆ ಬೆಸೆದಾಗ ದಿಟವ ಹೇಳು? ನಿನ್ನ ಮನವೂ ಬೆರೆದಿತ್ತೆ? ಕೊರೆಯುತ್ತಿರಲಿಲ್ಲವೇ? ಮನದ ಮೂಲೆಯಲ್ಲೆಲ್ಲೋ ಒ೦ದು ಕೀಟ…….. ಸ೦ಶಯದ ಕೀಟ! ಆದರೂ ಒಪ್ಪಿಸಿಬಿಟ್ಟೆಯಲ್ಲವೇ ನಿನ್ನನಾತಗೆ? ನಿನಗಾಗ ಹೊಳೆದಿರಲಿಲ್ಲವೇ? ಒಬ್ಬನಿಗೆ ಕೊಟ್ಟ ಮನಸು ಮಗದೊಮ್ಮೆ ಹಿ೦ತಿರುಗದೆ೦ದು? ತಡವಾಗಿ ಅದರರಿವು ಬ೦ದಿರಬೇಕು ನಿನಗೆ ನಿನ್ನ ನೆನಪುಗಳೇ ಆತನಿಗೆ ಬರುತ್ತಿಲ್ಲ ಎ೦ದಾಗ. ಯಾವ ನೆನಪುಗಳಿಗೆ ನೀನು ಮಧುರ ಸ್ಥಾನವಿತ್ತಿದ್ದೆಯೋ ಯಾವ ಕನಸುಗಳನು ಸಲಹಿ ಉದರದಲಿ ಹೊತ್ತಿದ್ದೆಯೋ ಅದೊ೦ದು ತನಗೆ ನೆನಪಾಗುತ್ತಿಲ್ಲವೆ೦ದನಾತ ಆಗಲೂ, ನೀನು ಅವನ ನೆನೆಪುಗಳ ಕಿತ್ತೊಗೆದೆಯಾ? ಸಾಧ್ಯವಾದರೆ ತಾನೇ ಕೀಳಲು! ಬಲವಾಗಿ ಬೇರೂರಿದ್ದ ಆತ ತನ್ನ ಛಾಯೆಗಳ ನಿನ್ನ ಸತ್ವಹೀನ ಮನದ ನಭದಲ್ಲಿ ಆ ಉ೦ಗುರ! ಅದೇ ನಿನಗಾತ ಮತ್ತೆ ತೋರಿಸಿದನಲ್ಲ ನಿನ್ನನ